
ಹಗರಿಬೊಮ್ಮನಹಳ್ಳಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ, ಹಗರಿಬೊಮ್ಮನಹಳ್ಳಿರವರ ಪ್ರಕಟಣೆ ದಿನಾಂಕ:13.07.2024 ರಂದು ನಡೆಯಲಿರುವ “ರಾಷ್ಟ್ರೀಯ ಲೋಕ್-ಆದಾಲತ್” ನ ಅಂಗವಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳನ್ನು ಮತ್ತು ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು ಹಾಗೂ ಇತರೆ ರಾಜೀಯಾಗಬಹುದಾದ ಪ್ರಕರಣಗಳನ್ನು ಸಂಧಾನಕ್ಕಾಗಿ ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ತಕ್ಷಣವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ.
ಪ್ರತಿ ದಿನ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಾಕ್ಗಳು ನಡೆಯುತ್ತಲಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕೋರ್ಟ್ ನ ಕಾನೂನು ಸೇವೆಗಳ ಸಮಿತಿ ಕಾರ್ಯಲಯವನ್ನು ಸಂಪರ್ಕಿಸಿ.